ಕುವೆಂಪುರವರ, ಜನಪ್ರಿಯ ವಾಲ್ಮೀಕಿ ರಾಮಾಯಣ
ನಮ್ಮ ದೇಶದ ಸಾಹಿತ್ಯಕ್ಕೆ ರಾಮಾಯಣ, ಮಹಾಭಾರತ ಮೂಲದ್ರವ್ಯ ಎಂದು ಹೇಳಬಹುದು. ನಮ್ಮ ದೇಶದ ಯಾವುದೇ ಊರಿಗೆ ಹೋದರೂ, 'ರಾಮ ಇಲ್ಲಿ ಕೂತಿದ್ದ:, 'ಹನುಮಂತ ಇಲ್ಲಿ ವಿಶ್ರಮಿಸಿದ್ದ', 'ಲಕ್ಷಣ ಇಲ್ಲಿ ಸ್ನಾನ ಮಾಡಿದ್ದ', ಈ ರೀತಿಯ ಹಲವು ಕತೆಗಳಿರುತ್ತವೆ. ಎಲ್ಲರೊಳಗೂ ಆ ಪಾತ್ರಗಳ ಬೆರೆತುಬಿಟ್ಟಿವೆ. ಅವುಗಳಲ್ಲಿನ ಪಾತ್ರಗಳನ್ನು ಪ್ರತಿದಿನ ನಮಗೆ ಗೊತ್ತಿಲ್ಲದೆ ನೆನೆಯುತ್ತಿರುತ್ತೆವೆ. ಇದೇನಿದು 'ಹನುಮಂತನ ಬಾಲ ಇದ್ದ ಹಾಗೇ ಇದೆ', 'ನಿಂದೊಳ್ಳೆ ರಾಮಾಯಣ ಆಯ್ತು', 'ನೀನ್ ಬಿಡಪ್ಪ ಕೃಷ್ಣ ಪರಮಾತ್ಮ', 'ಶಬರಿ ಕಾದಂಗೆ ಕಾದನಲ್ಲೊ' ಹೀಗೆ ಒಂದಿಲ್ಲೊಂದು ಕಡೆ ನಮಗರಿವಿಲ್ಲದಂತೆ ಆ ಪಾತ್ರಗಳನ್ನು ಸ್ಮರಿಸುತ್ತೆವೆ. ಚಿಕ್ಕಂದಿನಿಂದಲೂ ಈ ಮಹಾಕಾವ್ಯಗಳ ಕಥೆಗಳೆಂದರೆ ಒಂದು ರೀತಿಯ ಆಕರ್ಷಣೆ ನನಗೆ, ಟಿವಿಯಲ್ಲಿ ಬರುತ್ತಿದ್ದ ಧಾರಾವಾಹಿಗಳನ್ನು ಬೆರಗಾಗಿ ನೋಡುತ್ತಿದ್ದೆ. ಪತ್ರಿಕೆಗಳಲ್ಲಿ ಬರುವ ಈ ಕೃತಿಗಳನ್ನಾಧರಿಸಿದ ಕಿರುಗತೆಗಳನ್ನು ಆಸಕ್ತಿಯಿಂದ ಓದುತ್ತಿದ್ದೆ, 'ಸಂಪೂರ್ಣ ರಾಮಯಣ', 'ಸಂಪೂರ್ಣ ಮಹಾಭಾರತ' ಎಂಬ ಕೆಲ ಪುಸ್ತಕಗಳನ್ನು ಹೈಸ್ಕೂಲಿನಲ್ಲಿ ಓದಿದ್ದೆ, ಇತ್ತೀಚೆಗಂತೂ ತುಂಬಾ ವಿವಾದಗಳು, ಮತದ್ವೇಷಗಳನ್ನು ಕಂಡು ಮತ್ತೊಮ್ಮೆ ರಾಮಾಯಣವನ್ನು ಓದಬೇಕೆನಿಸಿತು, ಆದರೆ ಕುಮಾರವ್ಯಾಸ ಹೇಳುವಂತೆ 'ತಿಣುಕಿದನು ಫಣಿರಾಯ' ಎನ್ನುವಷ್ಟು ರಾಮಯಣಾಧ...
Comments
Post a Comment