ಕುವೆಂಪುರವರ, ಜನಪ್ರಿಯ ವಾಲ್ಮೀಕಿ ರಾಮಾಯಣ
ನಮ್ಮ ದೇಶದ ಸಾಹಿತ್ಯಕ್ಕೆ ರಾಮಾಯಣ, ಮಹಾಭಾರತ ಮೂಲದ್ರವ್ಯ ಎಂದು ಹೇಳಬಹುದು. ನಮ್ಮ ದೇಶದ ಯಾವುದೇ ಊರಿಗೆ ಹೋದರೂ, 'ರಾಮ ಇಲ್ಲಿ ಕೂತಿದ್ದ:, 'ಹನುಮಂತ ಇಲ್ಲಿ ವಿಶ್ರಮಿಸಿದ್ದ', 'ಲಕ್ಷಣ ಇಲ್ಲಿ ಸ್ನಾನ ಮಾಡಿದ್ದ', ಈ ರೀತಿಯ ಹಲವು ಕತೆಗಳಿರುತ್ತವೆ. ಎಲ್ಲರೊಳಗೂ ಆ ಪಾತ್ರಗಳ ಬೆರೆತುಬಿಟ್ಟಿವೆ. ಅವುಗಳಲ್ಲಿನ ಪಾತ್ರಗಳನ್ನು ಪ್ರತಿದಿನ ನಮಗೆ ಗೊತ್ತಿಲ್ಲದೆ ನೆನೆಯುತ್ತಿರುತ್ತೆವೆ. ಇದೇನಿದು 'ಹನುಮಂತನ ಬಾಲ ಇದ್ದ ಹಾಗೇ ಇದೆ', 'ನಿಂದೊಳ್ಳೆ ರಾಮಾಯಣ ಆಯ್ತು', 'ನೀನ್ ಬಿಡಪ್ಪ ಕೃಷ್ಣ ಪರಮಾತ್ಮ', 'ಶಬರಿ ಕಾದಂಗೆ ಕಾದನಲ್ಲೊ' ಹೀಗೆ ಒಂದಿಲ್ಲೊಂದು ಕಡೆ ನಮಗರಿವಿಲ್ಲದಂತೆ ಆ ಪಾತ್ರಗಳನ್ನು ಸ್ಮರಿಸುತ್ತೆವೆ. ಚಿಕ್ಕಂದಿನಿಂದಲೂ ಈ ಮಹಾಕಾವ್ಯಗಳ ಕಥೆಗಳೆಂದರೆ ಒಂದು ರೀತಿಯ ಆಕರ್ಷಣೆ ನನಗೆ, ಟಿವಿಯಲ್ಲಿ ಬರುತ್ತಿದ್ದ ಧಾರಾವಾಹಿಗಳನ್ನು ಬೆರಗಾಗಿ ನೋಡುತ್ತಿದ್ದೆ. ಪತ್ರಿಕೆಗಳಲ್ಲಿ ಬರುವ ಈ ಕೃತಿಗಳನ್ನಾಧರಿಸಿದ ಕಿರುಗತೆಗಳನ್ನು ಆಸಕ್ತಿಯಿಂದ ಓದುತ್ತಿದ್ದೆ, 'ಸಂಪೂರ್ಣ ರಾಮಯಣ', 'ಸಂಪೂರ್ಣ ಮಹಾಭಾರತ' ಎಂಬ ಕೆಲ ಪುಸ್ತಕಗಳನ್ನು ಹೈಸ್ಕೂಲಿನಲ್ಲಿ ಓದಿದ್ದೆ, ಇತ್ತೀಚೆಗಂತೂ ತುಂಬಾ ವಿವಾದಗಳು, ಮತದ್ವೇಷಗಳನ್ನು ಕಂಡು ಮತ್ತೊಮ್ಮೆ ರಾಮಾಯಣವನ್ನು ಓದಬೇಕೆನಿಸಿತು, ಆದರೆ ಕುಮಾರವ್ಯಾಸ ಹೇಳುವಂತೆ 'ತಿಣುಕಿದನು ಫಣಿರಾಯ' ಎನ್ನುವಷ್ಟು ರಾಮಯಣಾಧ...
ಸುಪರ್ಬ್ (y)
ReplyDeleteಧನ್ಯವಾದಗಳು
DeleteThis comment has been removed by the author.
ReplyDelete